Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:21 - ಕನ್ನಡ ಸತ್ಯವೇದವು J.V. (BSI)

21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸಗ್ಳಿ ಲೊಕಾಬಿ ಅಪ್ಲ್ಯಾ ಸ್ವತಾಚ್ಯಾ ಕಾಮಾ ವೈನಿ ಮನ್ ಥವ್ತಲೆಚ್, ಖರೆ ಜೆಜು ಕ್ರಿಸ್ತಾಚ್ಯಾ ಕಾಮಾ ವೈನಿ ಮನ್ ಥೈಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:21
19 ತಿಳಿವುಗಳ ಹೋಲಿಕೆ  

ಆದರೆ ಎಲ್ಲವೂ ಭಕ್ತಿಯನ್ನು ಬೆಳಿಸುವದಿಲ್ಲ.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.


ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಯಾಜಕರು ಅರಸನಾದ ಯೆಹೋವಾಷನ ಆಳಿಕೆಯ ಇಪ್ಪತ್ತಮೂರನೆಯ ವರುಷದವರೆಗೂ ದೇವಾಲಯವನ್ನು ಜೀರ್ಣೋದ್ಧಾರಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು