Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:27 - ಕನ್ನಡ ಸತ್ಯವೇದವು J.V. (BSI)

27 ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬದು ನಿಜವೇ ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ಸಿಕೆತ್ ಪಡುನ್ ಮರ್ತಲ್ಯಾಚ್ಯಾ ಗತಿನ್ ಹೊಲ್ಲೊ ಮನ್ತಲೆ ಖರೆಚ್, ಖರೆ ದೆವಾನ್ ತೆಕಾ ದಯಾ ದಾಕ್ವುಲ್ಯಾನ್, ಅನಿ ತೆಕಾ ತವ್ಡೆಚ್ ನ್ಹಯ್, ವೈಲ್ಯಾ ವೈರ್ ದುಕ್ಕ್ ಯೆಯ್ನಾ ಸಾರ್ಕೆ ಮಾಕಾಬಿ ದಯಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:27
23 ತಿಳಿವುಗಳ ಹೋಲಿಕೆ  

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಆ ಕಾಲದಲ್ಲಿ ಆಕೆ ರೋಗದಲ್ಲಿ ಬಿದ್ದು ಸತ್ತಳು, ಮತ್ತು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು.


ಆದದರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡಬೇಕೆಂತಲೂ ನನಗೆ ಕೂಡ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಹೆಚ್ಚಾದ ಅವಸರದಿಂದ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು