Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:13 - ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಭಾವಾನು ಅನಿ ಭೆನಿಯಾನು, ಮಿಯಾತರ್ ಧರುನ್ ಘೆಟಲೊ ಮನುನ್ ಚಿಂತುನ್ ಘೆಯ್ನಾ, ಖರೆ ಹೆ ಎಕ್ ಕರ್‍ತಾ , ಮಿಯಾ ಅದ್ಲಿ ವಿಶಯಾ ಇಸ್ರುನ್ ಸೊಡುನ್ ಫಿಡೆ ಹೊತಲೆ ಹೊತ್ತೆ ಧರುಕ್ ಸಾಟ್ನಿ ಮಾಜ್ಯಾಕ್ನಾ ಹೊತಾ ತವ್ಡೆ ಕಟ್ಪಟುಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:13
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಎಲೌ ಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು