Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:3
32 ತಿಳಿವುಗಳ ಹೋಲಿಕೆ  

ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ಈಗಲಾದರೋ ನಮ್ಮನ್ನು ವಶಮಾಡಿಕೊಂಡಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತಕಾರಣ ಆ ಧರ್ಮಶಾಸ್ತ್ರದಿಂದ ವಿಮುಕ್ತರಾಗಿದ್ದೇವೆ. ಹೀಗಿರಲಾಗಿ ಶಾಸ್ತ್ರದ ಹೊರಗಣ ಅರ್ಥಕ್ಕೆ ಅನುಕೂಲವಾದ ಹಳೇ ರೀತಿಯಲ್ಲಿ ನಾವು ದೇವರನ್ನು ಸೇವಿಸುವವರಲ್ಲ. ಪವಿತ್ರಾತ್ಮಪ್ರೇರಿತವಾದ ಹೊಸ ರೀತಿಯಲ್ಲಿ ಆತನನ್ನು ಸೇವಿಸುವವರಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ


ದೇವರ ಸೇವೆಯಲ್ಲಿ ಹೊಗಳಿಕೊಳ್ಳುವದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು.


ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರಿಗೆ ಅಂದರೆ ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ ಕರುಣೆಯೂ ಆಗಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು