Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:11 - ಕನ್ನಡ ಸತ್ಯವೇದವು J.V. (BSI)

11 ಆಮೋನನು ಯೋಷೀಯನನ್ನು ಪಡೆದನು. ಪ್ರಜೆಯು ಬಾಬೆಲಿಗೆ ಸೆರೆಹೋದ ಸಮಯದಲ್ಲಿ ಯೋಷೀಯನು ಯೆಕೊನ್ಯನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಯೊಸಿಯಾ ಯೆಕೊನಿಯಾಚೊ ಅನಿ ಭಾವಾಂಚೊ ಬಾಬಾ. ಹೆಂಚ್ಯಾ ಕಾಲಾತ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:11
17 ತಿಳಿವುಗಳ ಹೋಲಿಕೆ  

ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು,


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಯೆಹೋವಾಹಾಜನು ಅರಸನಾದಾಗ ಇಪ್ಪತ್ತ ಮೂರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಅದ ಹಮೂಟಲ್ ಎಂಬಾಕೆಯು ಇವನ ತಾಯಿ.


ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಬಾಬೆಲಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನು ಜೆರುಬ್ಬಾಬೆಲನನ್ನು ಪಡೆದನು.


ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು