Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:14 - ಕನ್ನಡ ಸತ್ಯವೇದವು J.V. (BSI)

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜರ್ ಎಕ್ ಗಾವಾತ್ಲ್ಯಾ ಲೊಕಾನಿ ನಾಹೊಲ್ಯಾರ್ ಘರಾತ್ಲ್ಯಾ ಲೊಕಾನಿ ತುಮ್ಕಾ ಮರ್‍ಯಾದ್ ದಿನಸ್ಲ್ಯಾರ್, ಅನಿ ತುಮಿ ಸಾಂಗಲ್ಲೆ ಆಯ್ಕಿನಸ್ಲ್ಯಾರ್ ತೊ ಜಾಗೊ ಸೊಡುನ್ ಫಿಡೆ ಚಲಾ, ಅನಿ ಜಾತಾನಾ ತುಮ್ಚ್ಯಾ ಪಾಯಾಂಚಿ ಧುಳ್ ಫಾಪ್ಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:14
14 ತಿಳಿವುಗಳ ಹೋಲಿಕೆ  

ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು.


ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ; ಅದು ಅವರಿಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.


ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು