Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:17 - ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:17
26 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;


ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.


ಆ ನಾಯಿಗಳಿಗೆ ಎಚ್ಚರಿಕೆಯಾಗಿರಿ; ದುರ್ಮನಸ್ಸಿನಿಂದ ಕೆಲಸಮಾಡುವವರಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಫೇದನ ಮಾಡುವವರಿಗೆ ಎಚ್ಚರಿಕೆಯಾಗಿರಿ.


ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಇದಲ್ಲದೆ ಅಣ್ಣನು ತಮ್ಮನನ್ನು ತಂದೆಯು ಮಗನನ್ನು ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು