Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:1 - ಕನ್ನಡ ಸತ್ಯವೇದವು J.V. (BSI)

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಸಗ್ಳೆ ಅಪ್ನಾಚ್ಯಾ ಬಾರಾ ಜಾನಾ ಶಿಸಾಕ್ನಿ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ತೊ ಜಾಗೊ ಸೊಡುನ್ ಥೈ ಹೊತ್ತ್ಯಾ ಜಗೊಳ್‍ಲ್ಯಾ ಶಾರಾತ್ನಿ ಶಿಕ್ವುಕ್ ಅನಿ ದೆವಾಚಿ ಬರಿ ಖಬರ್ ಸಾಂಗುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:1
19 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.


ಸಹೋದರರೇ, ನವ್ಮಿುಂದ ಹೊಂದಿದ ಬೋಧನೆಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ.


ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು.


ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ


ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು