Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:18 - ಕನ್ನಡ ಸತ್ಯವೇದವು J.V. (BSI)

18 ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್, ಜುವಾಂವ್ ಯೆಲೊ ಅನಿ ತೆನಿ ಉಪಾಸ್ ಕರ್‍ಲ್ಯಾನ್ ಅನಿ ವಾಯ್ನ್ ಫಿವ್ಕ್ ನಾ. ತನ್ನಾ ಸಗ್ಳ್ಯಾ ಲೊಕಾನಿ ತೆಕಾ ಗಿರೊಲಾಗ್ಲಾ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:18
17 ತಿಳಿವುಗಳ ಹೋಲಿಕೆ  

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.


ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.


ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು


ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.


ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು.


ಆದರೆ ಫರಿಸಾಯರು - ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.


ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ. ಗೋಳಾಡಿದೆವು, ನೀವು ಎದೆಬಡಕೊಳ್ಳಲಿಲ್ಲ ಎಂದು ಕೂಗಿಹೇಳುವಂಥ ಹುಡುಗರನ್ನು ಹೋಲುತ್ತದೆ.


ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು