Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:28 - ಕನ್ನಡ ಸತ್ಯವೇದವು J.V. (BSI)

28 ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಮೊಟಿ-ಮೊಟಿ ವಜ್ಜಿ ವಾವುನ್ ಘೆವ್ನ್ ಹಾರುನ್ ಗೆಲ್ಲ್ಯಾ ಸಗ್ಳ್ಯಾ ಲೊಕಾನು, ಮಾಜೆಕ್ಡೆ ಯೆವಾ, ಅನಿ ಮಿಯಾ ತುಮ್ಕಾ ಅರಾಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:28
36 ತಿಳಿವುಗಳ ಹೋಲಿಕೆ  

ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ಸಮಾಧಾನಪಡಿಸುತ್ತೀ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ಕಿಡಿಗಳು ಮೇಲಕ್ಕೆ ಹಾರುವದೂ ಮನುಷ್ಯರು ಶ್ರಮೆಯನ್ನು ಅನುಭವಿಸುವದೂ ಸಹಜ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ಸ್ತ್ರೀಯಲ್ಲಿ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನಾಗಿಯೂ ಕಳವಳದಿಂದ ತುಂಬಿದವನಾಗಿಯೂ ಇರುವನು.


ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು