Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:3 - ಕನ್ನಡ ಸತ್ಯವೇದವು J.V. (BSI)

3 ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?" ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜುವಾಂವಾಚ್ಯಾ ಶಿಸಾನಿ ಜೆಜುಕ್ಡೆ ಯೆವ್ನ್, ಜುವಾಂವಾನ್ ಯೆತಲೊ ಹಾಯ್ ಮನುನ್ ಸಾಂಗಟಲ್ಲೊ ಸುಟ್ಕಾದಿನಾರೊ ತಿಯಾಚ್ ಕಾಯ್, ಅಮಿ ಅನಿ ಎಕ್ಲ್ಯಾಚಿ ವಾಟ್ ಬಗುಚಿ? ಮನುನ್ ಅಮ್ಕಾ ಸಾಂಗ್. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:3
38 ತಿಳಿವುಗಳ ಹೋಲಿಕೆ  

ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ;


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುತ್ತಾ ನನ್ನನ್ನೇ ಮಹಿಮೆಪಡಿಸುವನು.


ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.


ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ.


ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು