Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:41 - ಕನ್ನಡ ಸತ್ಯವೇದವು J.V. (BSI)

41 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಝಡ್ತಿಚ್ಯಾ ದಿಸಿ ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಜೊನಾನ್ ಸಾಂಗಟಲ್ಲೆ ತೆನಿ ಆಯಿಕ್ಲ್ಯಾನಿ, ಅನಿ ಪಾಪಾನಿತ್ನಾ ದೆವಾಕ್ಡೆ ಪರತ್ಲ್ಯಾನಿ, ಖರೆ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಜೊನಾಚ್ಯಾನ್ಕಿ ಮೊಟೊ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:41
20 ತಿಳಿವುಗಳ ಹೋಲಿಕೆ  

ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.


ಆದರೆ ಇಲ್ಲಿ ದೇವಾಲಯಕ್ಕಿಂತ ಹೆಚ್ಚಿನವನು ಇದ್ದಾನೆಂದು ನಿಮಗೆ ಹೇಳುತ್ತೇನೆ. ನನಗೆ ಯಜ್ಞವು ಬೇಡ,


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.


ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; ಅವನೂ ಅವನ ಮಕ್ಕಳೂ ಅವನು ಸಾಕಿದೆಲ್ಲವೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದರು ಅನ್ನಲು


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಅದೆಲ್ಲಾ ಈ ಸಂತತಿಯವರ ಮೇಲೆ ಬರುವದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು