Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:44 - ಕನ್ನಡ ಸತ್ಯವೇದವು J.V. (BSI)

44 ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ತಿರಿಗಿ ಹೋಗುತ್ತೇನೆ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ ಗುಡಿಸಿ ಅಲಂಕರಿಸಿದ್ದೂ ಆಗಿರುವದನ್ನು ಕಂಡು ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೊ ಗಿರೊ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ ಮನ್ತಾ, ಅನಿ ಪರ್ತುನ್ ಯೆಲ್ಲ್ಯಾ ತನ್ನಾ, ತೆಕಾ ಜಾಗೊ ಖಾಲಿ ದಿಸ್ತಾ ಅನಿ ಪವಿತ್ರ್ ಅನಿ ಬರೊ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:44
23 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿರುತ್ತಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.


ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು