Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:52 - ಕನ್ನಡ ಸತ್ಯವೇದವು J.V. (BSI)

52 ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್, “ತಸೆಮಟ್ಲ್ಯಾರ್, ತನ್ನಾ ಸರ್‍ಗಾಚ್ಯಾ ರಾಜಾತ್ ಹರಿ ಎಕ್ ಖಾಯ್ದೆ ಶಿಕ್ವುತಲೊ ಎಕ್ ಸಿಸ್ ಹೊತಾ ದೆವಾಚ್ಯಾ ರಾಜಾಚೆ ಮನುನ್ ಹೊತ್ತೆ ಸಾಮಾನಾ ಥವ್ತಲ್ಯಾ ಖೊಲಿತ್ನಾ ನ್ಹವಿ ಅನಿ ಜುನ್ನಿ ಸಾಮಾನಾ ಭಾಯ್ರ್ ಕಾಡ್ತಲ್ಯಾ ಘರಾಚ್ಯಾ ವ್ಹಡಿಲಾ ಸರ್‍ಕೊ,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:52
31 ತಿಳಿವುಗಳ ಹೋಲಿಕೆ  

ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.


ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.


ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಆ ಸತ್ಯೋಪದೇಶವನ್ನು ಕಲಿತುಕೊಂಡಿರಿ. ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.


ಕಾಮಜನಕ ವೃಕ್ಷಗಳು ಪರಿಮಳಬೀರುತ್ತವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ ಬಗೆಬಗೆಯ ಹಳೆ ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು.


ಯೇಸು ಈ ಸಾಮ್ಯಗಳನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು