Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:23 - ಕನ್ನಡ ಸತ್ಯವೇದವು J.V. (BSI)

23 ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಜೆಜುನ್ ತಿಚೆಕ್ಡೆ ಎಕ್ ಸಂಬದ್ ಸೈತ್ ಬೊಲುಕ್ನಾ, ತೆಚಿ ಶಿಸಾ ಫಿಡೆ ಯೆಲಿ ಅನಿ, “ತ್ಯಾ ಬಾಯ್ಕೊಮನ್ಸಿಕ್ ಹಿತ್ನಾ ಧಾಡುನ್ ದಿ. ಝುಟುಚ್ ಬೊಬ್ ಮಾರುನ್ಗೆತ್ ತಿ ಅಮ್ಚ್ಯಾ ಫಾಟ್ನಾಚ್ ಯೆವ್ಲಾ!” ಮನುನ್ ಜೆಜುಕ್ಡೆ ಲೈ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:23
8 ತಿಳಿವುಗಳ ಹೋಲಿಕೆ  

ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡನು.


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದಾಗ್ಯೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಬಿರುನುಡಿಯಿಂದ - ನೀವು ಎಲ್ಲಿಂದ ಬಂದವರು ಎಂದು ಕೇಳಿದನು. ಅವರು - ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ ಅಂದರು.


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು