Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಉಲ್ಲೆ ಫಾರಿಜೆವ್ ಅನಿ ಸಾದುಸೆವ್ ಜೆಜುಚಿ ಪರಿಕ್ಷಾ ಕರುಸಾಟಿ ಮನುನ್ ಯೆಲೆ. ಅನಿ, “ತಿಯಾ ಸರ್ಗಾತ್ನಾ ಯೆಲ್ಲೊ ಮಾನುಸ್ ಮನುನ್ ದಾಕ್ವುಕ್ ಎಕ್ ಮೊಟೆ ವಿಚಿತ್ರ್ ಕಾಮ್ ಕರುನ್ ದಾಕ್ವು.” ಮನುನ್ ಜೆಜುಕ್ಡೆ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:1
33 ತಿಳಿವುಗಳ ಹೋಲಿಕೆ  

ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕು ಎಂದು ಕೇಳಿದರು.


ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ


ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;


ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -


ಆತನು ಅವರ ಕುಯುಕ್ತಿಯನ್ನು ಕಂಡುಕೊಂಡು


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ತರುವಾಯ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.


ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.


ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.


ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -


ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;


ಅದೇ ದಿನದಲ್ಲಿ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?


ಆಗ್ಗೆ ಫರಿಸಾಯರು ಹೊರಟು ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸುವ ಎಂದು ಕೂಡಿ ಆಲೋಚಿಸಿಕೊಂಡು


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ


ಆಗ ಯೆರೂಸಲೇವಿುನಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು -


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.


ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು; ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು