Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:3 - ಕನ್ನಡ ಸತ್ಯವೇದವು J.V. (BSI)

3 ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಅನಿ ಸಕ್ಕಾಳಿ ಫಿಡೆ ಮಳಬ್ ತಾಂಬ್ಡೊ ಅನಿ ಎಕ್ ನಮುನಿ ಕಾಳೊಕ್ ಹೊಲ್ಲ್ಯಾ ಸರ್ಕೊ ಹೊವ್ನ್ ರ್‍ಹಾಲ್ಯಾರ್, ‘ಪಾವ್ಸ್ ಯೆನಾರ್ ಹಾಯ್.’” ಮನ್ತ್ಯಾಶಿ. ಮಳ್ಬಾಕ್ ಬಗುಕ್ ವಾತಾವರನ್ ಕಶೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ, ಖರೆ ಹ್ಯಾ ದಿಸಾಂಚಿ ವಳಕ್ ತುಮ್ಕಾ ವಳ್ಕುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:3
11 ತಿಳಿವುಗಳ ಹೋಲಿಕೆ  

ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ?


ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;


ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.


ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು ಎಂದು ಹೇಳಿದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ -


ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು