Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:23 - ಕನ್ನಡ ಸತ್ಯವೇದವು J.V. (BSI)

23 ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ತೆಕಾ ಜಿವಾನಿ ಮಾರ್‍ತ್ಯಾತ್, ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ತನ್ನಾ ಶಿಸಾಕ್ನಿ ಲೈ ಬೆಜಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:23
18 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ.


ಯೇಸು - ಈ ದೇವಾಲಯವನ್ನು ಕೆಡವಿರಿ; ನಾನು ಮೂರು ದಿನದಲ್ಲಿ ಅದನ್ನು ಎಬ್ಬಿಸುವೆನು ಅಂದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.


ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಇದು ಜನರಿಗೆ ಗೊತ್ತಾಗಬಾರದೆಂದು ಆತನಿಗೆ ಮನಸ್ಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು