Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:27 - ಕನ್ನಡ ಸತ್ಯವೇದವು J.V. (BSI)

27 ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:27
27 ತಿಳಿವುಗಳ ಹೋಲಿಕೆ  

ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.


ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.


ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಆಕಾಶಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.


ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.


ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.


ಯೆಹೋವನು ಮೀನಿಗೆ ಅಪ್ಪಣೆಮಾಡಲು ಅದು ಯೋನನನ್ನು ಒಣನೆಲದಲ್ಲಿ ಕಾರಿ ಬಿಟ್ಟಿತು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಯೇಸು ತನ್ನ ಶಿಷ್ಯರು ಇದಕ್ಕೆ ಗುಣುಗುಟ್ಟುತ್ತಾರೆಂದು ತನ್ನಲ್ಲಿ ತಿಳುಕೊಂಡು ಅವರಿಗೆ - ಈ ಮಾತಿನಿಂದ ನಿಮಗೆ ಬೇಸರವಾಯಿತೋ?


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ಅವನು - ಬೇರೆಯವರಿಂದ ಎಂದು ಉತ್ತರಕೊಡಲು ಯೇಸು ಅವನಿಗೆ - ಹಾಗಾದರೆ ಮಕ್ಕಳು ಅದಕ್ಕೆ ಒಳಗಾದವರಲ್ಲವಲ್ಲಾ.


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.


ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು