ಮತ್ತಾಯ 17:9 - ಕನ್ನಡ ಸತ್ಯವೇದವು J.V. (BSI)9 ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಮಡ್ಡಿ ವೈನಾ ಉತ್ರುನ್ ಯೆತಾನಾ, ತುಮಿ ಮಡ್ಡಿ ವರ್ತಿ ಬಗಟಲ್ಲೆ, ಮಾನ್ಸಾಚೊ ಲೆಕ್ ಮರುನ್ ಝಿತ್ತೊ ಹೊಯ್ ಪತರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |