Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:13 - ಕನ್ನಡ ಸತ್ಯವೇದವು J.V. (BSI)

13 ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಖರೆಚ್ ಸಾಂಗ್ತಾ,ತೆಕಾ ತೆ ಬಕ್ರೆ ಗಾವಲ್ಲ್ಯಾ ತನ್ನಾ, ಹುರಲ್ಲ್ಯಾ ನ್ಹವದಾರ್ ನ್ಹವ್ ಬಕ್ರ್ಯಾಂಚ್ಯಾನ್ಕಿ ಹೆ ಕಳ್ದಲ್ಲೆ ಎಕ್ ಬಕ್ರೆ ಗಾವಲ್ಲ್ಯಾ ಸಾಟ್ನಿ ತೊ ಲೈ ಮಟ್ಲ್ಯಾರ್ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:13
14 ತಿಳಿವುಗಳ ಹೋಲಿಕೆ  

ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಅನ್ಯಾಯವನ್ನು ನೋಡಿ ಸಂತೋಷಪಡದೆ ಸತ್ಯಕ್ಕೆ ಜಯವಾಗುವಲ್ಲಿ ಸಂತೋಷಪಡುತ್ತದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು