Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:20 - ಕನ್ನಡ ಸತ್ಯವೇದವು J.V. (BSI)

20 ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಖೈ ದೊಗೆ ಜಾನಾ ನಾಜಾಲ್ಯಾರ್ ತಿಗೆಜಾನಾ ಮಾಜ್ಯಾ ನಾವಾನ್ ಗೊಳಾ ಹೊತ್ಯಾತ್, ಥೈ ತೆಂಚ್ಯಾ ವಾಂಗ್ಡಾ ಮಿಯಾಚ್ ಹಾಜರ್ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:20
15 ತಿಳಿವುಗಳ ಹೋಲಿಕೆ  

ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಸಹೋದರಿಯಾದ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ -


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು


ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು