Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:31 - ಕನ್ನಡ ಸತ್ಯವೇದವು J.V. (BSI)

31 ಅವನ ಜೊತೇ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಬಗುನ್ ಹುರಲ್ಲ್ಯಾ ಆಳಾಕ್ನಿ ಲೈ ವಾಯ್ಟ್ ದಿಸ್ಲೆ. ತೆನಿ ಜಾವ್ನ್ ಹೆ ರಾಜಾಕ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:31
16 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.


ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.


ಆಗ ಅವನ ಒಡೆಯನು ಅವನನ್ನು ಕರಸಿ - ಎಲಾ ನೀಚನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ಆ ಸಾಲವನ್ನೆಲ್ಲಾ ನಾನು ಬಿಟ್ಟುಬಿಟ್ಟೆನಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು