Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:9 - ಕನ್ನಡ ಸತ್ಯವೇದವು J.V. (BSI)

9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ಎರಡು ಕಣ್ಣುಳ್ಳವನಾಗಿದ್ದು ಅಗ್ನಿ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ಜೀವದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ಕಣ್ಣು ನಿನ್ನನ್ನು ಪಾಪಕ್ಕೆ ನಡೆಸಿದರೆ, ಅದನ್ನು ಕಿತ್ತು ಎಸೆದುಬಿಡು. ಎರಡು ಕಣ್ಣುಳ್ಳವನಾಗಿದ್ದು ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚೊ ಡೊಳೊ ತುಮ್ಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಮೆಟ್ಟುನ್ ಕಾಡುನ್ ಧುರ್ ನ್ಹೆವ್ನ್ ಟಾಕಾ, ದೊನ್ ಡೊಳೆ ಥವ್ನ್ ಘೆವ್ನ್, ನರ್‍ಕಾತ್ ಆಗಿತ್ ಪಡ್ತಲ್ಯಾಚ್ಯಾನ್ಕಿ ಎಕ್ ಡೊಳೊ ನಸ್ತಾನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ತುಮ್ಕಾ ಕವ್ಡೆಕಿ ಬರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:9
11 ತಿಳಿವುಗಳ ಹೋಲಿಕೆ  

ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.


ಆತನು ಅವನಿಗೆ - ಒಳ್ಳೇದನ್ನು ಕುರಿತು ನನ್ನನ್ನು ಯಾಕೆ ಕೇಳುತ್ತೀ? ಒಳ್ಳೆಯವನು ಒಬ್ಬನೇ. ಆದರೆ ಆ ಜೀವದಲ್ಲಿ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ಸರಿಯಾಗಿ ನಡೆದುಕೋ ಎಂದು ಹೇಳಿದ್ದಕ್ಕೆ


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು