Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:16 - ಕನ್ನಡ ಸತ್ಯವೇದವು J.V. (BSI)

16 ಆಗ ಒಬ್ಬನು ಬಂದು ಆತನನ್ನು - ಬೋಧಕನೇ, ನಾನು ನಿತ್ಯಜೀವವನ್ನು ಪಡೆಯಬೇಕಾದರೆ ಏನು ಒಳ್ಳೇ ಕಾರ್ಯವನ್ನು ಮಾಡಬೇಕು ಎಂದು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಎಗ್ದಾ ಎಕ್ ಮಾನುಸ್ ಜೆಜುಕ್ಡೆ ಯೆಲೊ. ಅನಿ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ಮಟ್ಲ್ಯಾರ್ ಮಿಯಾ ಕಾಯ್ ಬರೆ ಕಾಮ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:16
32 ತಿಳಿವುಗಳ ಹೋಲಿಕೆ  

ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ತನ್ನ ಪ್ರಾಣದ ಮೇಲೆ ಮಮತೆಯಿಡುವವನು ಅದನ್ನು ಕಳಕೊಳ್ಳುವನು, ಇಹಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಅವುಗಳ ಮೇಲೆ ಕೈಯಿಟ್ಟು, ಅಲ್ಲಿಂದ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು