Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:16 - ಕನ್ನಡ ಸತ್ಯವೇದವು J.V. (BSI)

16 ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯಾ ಭೆಟುಕ್ ಯೆಲ್ಲ್ಯಾನಿ ಅಪ್ನಾಕ್ ಪಸ್ವುಲ್ಯಾನಿ ಮನುನ್ ಹೆರೊದಾಕ್ ಕಳ್ಳೆ, ತನ್ನಾ ಹೆರೊದ್ ರಾಜಾಕ್ ಕಡ್ಕಡುನ್ ರಾಗ್ ಯೆಲೊ ತ್ಯಾ ಭೆಟುಕ್ ಯೆಲ್ಲ್ಯಾನಿಕ್ನಾ ಆಯ್ಕುನ್ ಘೆಟಲ್ಲ್ಯಾ ಎಳಾಚೊ ಅಂದಾಜ್ ಕರುನ್ ಘೆವ್ನ್ ಬೆತ್ಲೆಹೆಮಾತ್ ಅನಿ ಭೊತ್ಯಾನಿ ಹೊತ್ತ್ಯಾ ಗಾವಾನಿತ್ಲ್ಯಾ ದೊನ್ ವರ್ಸಾಚ್ಯಾ ಭುತ್ತುರ್‍ಲ್ಯಾ ಝಿಲ್ ಪೊರಾಕ್ನಿ ಜಿವಾನಿ ಮಾರಾ ಮನುನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ದಿಲ್ಯಾನ್. ಅನಿ ತೆನಿ ಸಗ್ಳ್ಯಾ ಪೊರಾಕ್ನಿ ಜಿವಾನಿ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:16
21 ತಿಳಿವುಗಳ ಹೋಲಿಕೆ  

ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಹಜಾಯೇಲನು ಅವನನ್ನು - ನನ್ನ ಒಡೆಯಾ, ಯಾಕೆ ಅಳುತ್ತೀ ಎಂದು ಕೇಳಿದನು. ಅದಕ್ಕೆ ಅವನು - ನೀನು ಇಸ್ರಾಯೇಲ್ಯರಿಗೆ ಎಷ್ಟು ಕೇಡು ಮಾಡುವಿಯೆಂಬದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ ಎಂದು ಉತ್ತರ ಕೊಟ್ಟನು.


ದೆಲೀಲಳು ತಿರಿಗಿ ಸಂಸೋನನಿಗೆ - ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂಬದನ್ನು ದಯವಿಟ್ಟು ನನಗೆ ತಿಳಿಸು ಎಂದಳು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.


ಅದಕ್ಕೆ ಬಿಳಾಮನು - ನೀನು ಇಷ್ಟಬಂದಂತೆ ನನ್ನನ್ನು ಆಡಿಸಿದಿಯಲ್ಲಾ; ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದುಹಾಕಿ ಬಿಡುತ್ತಿದ್ದೆ ಅಂದನು.


ಪತಿಯು ಬಂದಾಗ ಆಕೆ ಅದೇ ಮಾತನ್ನು ಹೇಳಿ ಅವನಿಗೆ - ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಬಳಿಗೆ ಬಂದನು. ನಾನು ಕೂಗಿಕೊಂಡೆನು.


ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -


ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ -


ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು