Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:23 - ಕನ್ನಡ ಸತ್ಯವೇದವು J.V. (BSI)

23 ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಥೈ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾಲೊ. ಅಶೆ “ತೆಕಾ ನಜರೆತ್‍ಕಾರ್ ಮನುನ್ ಬಲ್ವುತ್ಯಾತ್” ಮನುನ್ ಪ್ರವಾದ್ಯಾನಿ ಜೆಜುಚ್ಯಾ ವಿಶಯಾತ್ ಸಾಂಗಟಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:23
20 ತಿಳಿವುಗಳ ಹೋಲಿಕೆ  

ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.


ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.


ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಆರನೆಯ ತಿಂಗಳಲ್ಲಿ ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ ನಜರೇತೆಂಬ ಊರಿಗೆ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು;


ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ -


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.


ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು