Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:15 - ಕನ್ನಡ ಸತ್ಯವೇದವು J.V. (BSI)

15 ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾಜೆ ಸ್ವತಾಚೆ ಪೈಸೆ ಮಿಯಾ ಮಾಕಾ ಪಾಜೆ ತಸೆ ಕರುಕ್ ಮಾಕಾ ಹಕ್ಕ್ ನಾ ಕಾಯ್? ಅನಿ ಎಕ್ಲ್ಯಾಕ್ ಬರೆ ಕರ್‍ತಲೆ ಬಗುನ್ ಪೊಟಾತ್ ಜಳುಲಾ ಕಾಯ್‍? ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:15
24 ತಿಳಿವುಗಳ ಹೋಲಿಕೆ  

ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು.


ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ.


ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.


ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.


ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು