Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಚೆಸಾಟ್ನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಎಕಾಕ್ಡೆ ಬಲ್ವುಲ್ಯಾನ್. ಅನಿ “ಖಲ್ಯಾಬಿ ಜುದೆವ್ ನ್ಹಯ್ ಹೊತ್ತೆ ಅದಿಕಾರಿ ಅಪ್ನಾ ವರ್‍ತಿ ಎಕ್ ಅದಿಕಾರ್ ಹಾಯ್ ಅನಿ ತೆಂಚ್ಯಾ ಮುಖಂಡಾಕ್ನಿ ಸಗ್ಳೆ ಕರ್‍ತಲೊ ಅದಿಕಾರ್ ಹಾಯ್ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:25
14 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರೆನಿಸಿಕೊಳ್ಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ಅವರಲ್ಲಿ ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ;


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.


ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು