Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:11 - ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತ್ಯಾ ತಾಂಡ್ಯಾತ್ಲ್ಯಾ ಲೊಕಾನಿ,“ಹ್ಯೊ ಗಾಲಿಲಿಯಾಚ್ಯಾ ನಜರೆತಾತ್ಲೊ ಜೆಜು ಎಕ್ ಪ್ರವಾದಿ.” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:11
20 ತಿಳಿವುಗಳ ಹೋಲಿಕೆ  

ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿ - ನಿಜವಾಗಿ ಈತನು ಬರಬೇಕಾದ ಪ್ರವಾದಿ ಅಂದರು;


ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.


ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.


ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು.


ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು.


ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.


ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಆದರೆ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು