Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:41 - ಕನ್ನಡ ಸತ್ಯವೇದವು J.V. (BSI)

41 ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ತೆನಿ, “ತೊ ಯೆವ್ನ್ ತ್ಯಾ ಬುರ್ಶ್ಯಾ ಗುತ್ಕೆ ಧರಲ್ಲ್ಯಾಕ್ನಿ ಖರೆಚ್ ಜಿವಾನಿ ಮಾರ್‍ತಾ ಅನಿ ಅಪ್ನಾಚೆ ಶೆತ್ ಸುಗ್ಗಿಕ್ ಅಪ್ನಾಚೊ ವಾಟೊ ದಿತಲ್ಯಾ ದುಸ್ರ್ಯಾ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾಕ್ ದಿತಾ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:41
38 ತಿಳಿವುಗಳ ಹೋಲಿಕೆ  

ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.


ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು


ಹಾಗಾದರೆ ದ್ರಾಕ್ಷೇತೋಟದ ಧಣಿಯು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡುವನು ಅಂದನು.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು