Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:16 - ಕನ್ನಡ ಸತ್ಯವೇದವು J.V. (BSI)

16 ಅಯ್ಯೋ, ದಾರಿತೋರಿಸುವ ಕುರುಡರೇ, ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ನೀವು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಲೊಕಾಕ್ನಿ ವಾಟ್ ದಾಕ್ವುತಲ್ಯಾ ಕುಡ್ಡ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಕೊನ್ ತರ್ ದೆವಾಚ್ಯಾ ಗುಡಿ ವರ್‍ತಿ ಆನ್ ಘಾಲುನ್ ಮಾಗುನ್ ಘೆಟ್ಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿ ಮನುನ್ ನಾ, ಖರೆ ದೆವಾಚ್ಯಾ ಗುಡಿತ್ಲ್ಯಾ ಸೊನ್ಯಾಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿಚ್ ಮನುನ್ ತುಮಿ ಶಿಕ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:16
14 ತಿಳಿವುಗಳ ಹೋಲಿಕೆ  

ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು.


ಹುಚ್ಚರೇ, ಕುರುಡರೇ, ಯಾವದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.


ಕುರುಡನಾದ ಫರಿಸಾಯನೇ, ಮೊದಲು ಪಂಚಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವದು.


ಕುರುಡರೇ, ಯಾವದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪಾವನ ಮಾಡುವ ಯಜ್ಞವೇದಿಯೋ?


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.


ಈ ಜನರನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರಷ್ಟೆ; ನಡಿಸಲ್ಪಟ್ಟವರೂ ನಾಶವಾಗುತ್ತಾರೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು