Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮ್ಚ್ಯಾ ಜಗ್ಗೊಳ್ ತುಮ್ಕಾ ಝಗ್ಡ್ಯಾಂಚೊ ಅವಾಜ್ ಆಯ್ಕೊ ಯೆತಾ ಅನಿ ಧುರ್‍ಲ್ಯಾ ಝಗ್ಡ್ಯಾಂಚಿ ಬಾತ್ಮಿಯಾ ತುಮ್ಕಾ ಆಯ್ಕುಕ್ ಗಾವ್ತಾತ್; ಖರೆ ತುಮಿ ಭಿವ್‍ನಕಾಶಿ. ಅಸ್ಲಿ ಸಗ್ಳಿ ಘಡಿತಾ ಘಡುಕುಚ್ ಪಾಜೆ ತೆಚೊ ಅರ್ತ್‍ ಸರ್‍ತೊ ಕಾಲ್ ಯೆಲೊ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:6
32 ತಿಳಿವುಗಳ ಹೋಲಿಕೆ  

ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಕರ್ತನ ದಿನವು ಈಗಲೇ ಹತ್ತಿರವಾಯಿತೆಂಬದಾಗಿ ದೇವರಾತ್ಮಪ್ರೇರಿತವಾದ ನುಡಿ ಇದೆ ಎಂದಾಗಲಿ ಪೌಲನು ಹಾಗೆ ಹೇಳಿದನೆಂದಾಗಲಿ ಪೌಲನು ಹಾಗೆ ಬರೆದನೆಂದಾಗಲಿ ಯಾರಾದರೂ ಹೇಳಿದರೂ ನೀವು ಬೇಗನೆ ಬುದ್ಧಿಗೆಟ್ಟು ಚಂಚಲರಾಗಿ ಕಳವಳಪಡಬೇಡಿರಿ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.


ಆಗ ಮತ್ತೊಂದು ಕುದುರೆಯು ಹೊರಟು ಬಂತು; ಅದು ಕೆಂಪು ಕುದುರೆ. ಅದರ ಮೇಲೆ ಕೂತಿದ್ದವನಿಗೆ ಭೂವಿುಯಿಂದ ಸಮಾಧಾನವನ್ನು ತೆಗೆದುಬಿಡುವದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗುವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಅವನಿಗೆ ದೊಡ್ಡ ಕತ್ತಿಯು ಕೊಡಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು