Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:40 - ಕನ್ನಡ ಸತ್ಯವೇದವು J.V. (BSI)

40 ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ರಾಜಾ ತೆಂಕಾ, ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಜೆ ಕಾಯ್ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್‍ ಸೈತ್ ಕರ್ಲ್ಯಾಶಿ ತೆ ಮಾಕಾಚ್ ಕರ್‍ಲ್ಯಾಶಿ! ಮನುನ್ ಜಬಾಬ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:40
42 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


[ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಆದದರಿಂದ ನಾವು ಅವನಿಗೋಸ್ಕರ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ, ಇವುಗಳನ್ನು ಇಡೋಣ; ಅವನು ಇಲ್ಲಿ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ ಎಂದು ಹೇಳಿದಳು.


ಯಾವಾಗ ನೀನು ರೋಗದಲ್ಲಿ ಬಿದ್ದದ್ದನ್ನು ಅಥವಾ ಸೆರೆಮನೆಯಲ್ಲಿ ಇದ್ದದ್ದನ್ನು ಕಂಡು ನಿನ್ನನ್ನು ನೋಡುವದಕ್ಕೆ ಬಂದೆವು ಎಂದು ಉತ್ತರವಾಗಿ ಹೇಳುವರು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು