Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:41 - ಕನ್ನಡ ಸತ್ಯವೇದವು J.V. (BSI)

41 ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:41
33 ತಿಳಿವುಗಳ ಹೋಲಿಕೆ  

ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಹೀಗಿರಲಾಗಿ ಹೇಗೆ ಹಣಜಿಯನ್ನು ಆರಿಸಿತೆಗೆದು ಸುಟ್ಟುಬಿಡುತ್ತಾರೋ, ಹಾಗೆಯೇ ಯುಗದ ಸಮಾಪ್ತಿಯಲ್ಲಿ ನಡೆಯುವದು.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ ಎಷ್ಟೋ ಒಳ್ಳೇದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ನೀನು ಗರ್ವಿಷ್ಠರನ್ನು ಗದರಿಸುತ್ತೀ; ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ನಾನು ಹಸಿದಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಡಲಿಲ್ಲ;


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು