Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:29 - ಕನ್ನಡ ಸತ್ಯವೇದವು J.V. (BSI)

29 ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಿಯಾ ತುಮ್ಕಾ ಸಾಂಗ್ತಾ, ಮಾಜ್ಯಾ ಬಾಬಾಚ್ಯಾ ರಾಜಾತ್ ತುಮ್ಚ್ಯಾ ವಾಂಗ್ಡಾ ನ್ಹವಿ ವಾಯ್ನ್ ಫಿತಲ್ಯಾ ದಿಸಾ ಪತರ್ ಹಿ ವಾಯ್ನ್ ಮಿಯಾ ಅನಿ ಕನ್ನಾಚ್ ಫಿ ನಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:29
31 ತಿಳಿವುಗಳ ಹೋಲಿಕೆ  

ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವದೇ ಇಲ್ಲ ಅಂದನು.


ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಪ್ರತ್ಯಕ್ಷನಾಗುವಂತೆ ಮಾಡಿದನು; ಆತನು ಎಲ್ಲರಿಗೆ ಪ್ರತ್ಯಕ್ಷನಾಗದೆ ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಅನ್ನಪಾನಗಳನ್ನು ತಕ್ಕೊಂಡೆವು.


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಬಳಿಕ ಅವರು ಕೀರ್ತನೆಯನ್ನು ಹಾಡಿ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು