Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:45 - ಕನ್ನಡ ಸತ್ಯವೇದವು J.V. (BSI)

45 ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ತೊ ಅಪ್ನಾಚ್ಯಾ ಶಿಸಾನಿಕ್ಡೆ ಪರ್ತುನ್ ಯೆಲೊ, ಅನಿ. “ಅಜುನ್‍ಬಿ ತುಮಿ ನಿಜುನ್ ಅರಾಮ್ ಕರುಕ್ ಲಾಗ್ಲ್ಯಾಶಿ? ಅಬಕಾ! ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಿತ್ ಒಪಸ್ತಲೊ ಎಳ್ ಯೆಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:45
14 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಆಮೇಲೆ ತಿರಿಗಿ ಅವರನ್ನು ಬಿಟ್ಟುಹೋಗಿ ತಿರಿಗಿ ಅದೇ ಮಾತನ್ನು ಹೇಳುತ್ತಾ ಮೂರನೆಯ ಸಾರಿ ಪ್ರಾರ್ಥಿಸಿದನು.


ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.


ನೆಲದ ಮೇಲೆ ಅಡ್ಡಬಿದ್ದು ಸಾಧ್ಯವಾದರೆ ಆ ಗಳಿಗೆ ತನ್ನನ್ನು ಬಿಟ್ಟುಹೋಗುವಂತೆ ದೇವರನ್ನು ಪ್ರಾರ್ಥಿಸಿ-


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು