Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:55 - ಕನ್ನಡ ಸತ್ಯವೇದವು J.V. (BSI)

55 ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತನ್ನಾ ಜೆಜುನ್ ತ್ಯಾ ಲೊಕಾಂಚ್ಯಾ ತಾಂಡ್ಯಾಕ್, “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ ಕೊಯ್ತೆ ಅನಿ ಟೊನೆ ಘೆವ್ನ್ ತುಮಿ ಮಾಕಾ ಧರುಕ್ ಯೆಲ್ಯಾಶಿ? ಸದ್ದಿಚ್ ಮಿಯಾ ದೆವಾಚ್ಯಾ ಗುಡಿತ್ ತುಮ್ಚ್ಯಾ ಮದ್ದಿಚ್ ಬಸುನ್ ತುಮ್ಕಾ ಶಿಕ್ವಿ, ತನ್ನಾ ತುಮಿ ಮಾಕಾ ಧರುಕ್‍ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:55
15 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ಯೇಸು ದೇವಾಲಯದಲ್ಲಿ ಉಪದೇಶ ಮಾಡುತ್ತಿರಲಾಗಿ ಪ್ರಶ್ನೆಮಾಡಿ - ಶಾಸ್ತ್ರಿಗಳು ಬರಬೇಕಾದ ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.


ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ


ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.


ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು