Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:70 - ಕನ್ನಡ ಸತ್ಯವೇದವು J.V. (BSI)

70 ಅಲ್ಲ, ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 “ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಆದರೆ ಪೇತ್ರನು, ಅಲ್ಲಿದ್ದ ಜನರೆಲ್ಲರ ಎದುರಿನಲ್ಲಿ ಆಕೆಗೆ, “ನೀನು ಏನು ಹೇಳುತ್ತಿರುವೆಯೋ ನನಗೆ ಗೊತ್ತೇ ಇಲ್ಲ” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

70 ಖರೆ ಪೆದ್ರುನ್ ತಿರಸ್ಕಾರ್ ಕರುನ್, “ತಿಯಾ ಖಚ್ಚ್ಯಾ ವಿಶಯಾತ್ ಬೊಲುಲೆಯ್ ಮನುನ್ ಮಾಕಾ ಗೊತ್ತ್ ನಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:70
17 ತಿಳಿವುಗಳ ಹೋಲಿಕೆ  

ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಹಿಡಿಯುತ್ತಲೆ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು.


ಇತ್ತಲಾಗಿ ಪೇತ್ರನು ಹೊರಗೆ ಅಂಗಳದಲ್ಲಿ ಕೂತಿದ್ದನು. ಅಲ್ಲಿ ಒಬ್ಬ ದಾಸಿಯು ಅವನ ಬಳಿಗೆ ಬಂದು - ನೀನು ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅನ್ನಲು ಅವನು -


ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು.


ಆದರೆ ಅವನು - ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು