Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:30 - ಕನ್ನಡ ಸತ್ಯವೇದವು J.V. (BSI)

30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ಕಸಕೊಂಡು ಆತನ ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ ಅನಿ ಖಾಟಿ ಘೆವ್ನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:30
12 ತಿಳಿವುಗಳ ಹೋಲಿಕೆ  

ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -


ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು