Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:52 - ಕನ್ನಡ ಸತ್ಯವೇದವು J.V. (BSI)

52 ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಸಾರಿಯಾ ಫುಟುನ್ ಉಗಡ್ಲ್ಯಾ, ಅನಿ ಸುಮಾರ್ ಮರಲ್ಲಿ ದೆವಾಚಿ ಲೊಕಾ ಝಿತ್ತಿ ಹೊವ್ನ್ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:52
13 ತಿಳಿವುಗಳ ಹೋಲಿಕೆ  

ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದೇ ಇದ್ದಾನೆ; ನಿದ್ರೆಹೋದವರಲ್ಲಿ ಪ್ರಥಮಫಲವಾದನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ;


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಈ ಕಾರಣದಿಂದಲೇ ನಿಮ್ಮಲ್ಲಿ ಬಹುಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ ಮತ್ತು ಅನೇಕರು ಸಾಯುತ್ತಾರೆ.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಒಂದು ದಿವಸ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವದಕ್ಕೆ ಹೋದಾಗ ಮೋವಾಬ್ಯರ ಗುಂಪು ಬರುತ್ತಿರುವದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿ ಹೋದರು. ಸತ್ತ ಮನುಷ್ಯನು ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ ಉಜ್ಜೀವಿಸಿ ಎದ್ದು ನಿಂತನು.


ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು