Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:7 - ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಜೆಜುನ್, “ಖರೆ ಪವಿತ್ರ್ ಪುಸ್ತಕ್, ಸರ್ವೆಸ್ವರಾಚಿ ತುಜ್ಯಾ ದೆವಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:7
21 ತಿಳಿವುಗಳ ಹೋಲಿಕೆ  

ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ಅವರು ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಶೋಧಿಸಿದರು.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿಯದೆ ಎಂತ ಉತ್ತರಕೊಟ್ಟನು.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು