Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:8 - ಕನ್ನಡ ಸತ್ಯವೇದವು J.V. (BSI)

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಸೈತಾನಾನ್ ಜೆಜುಕ್ ಎಕ್ ಲೈ ಮೊಟ್ಯಾ ಮಡ್ಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದುನಿಯಾತ್ಲ್ಯಾ ಸಗ್ಳ್ಯಾ ರಾಜಾಂಚೊ ವೈಭವ್ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:8
13 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -


ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.


ಆಗ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ -


ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.


ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು