Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:39 - ಕನ್ನಡ ಸತ್ಯವೇದವು J.V. (BSI)

39 ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಕಾ ಕೊನ್ ತರ್ ವಾಯ್ಟ್ ಕರ್‍ಲ್ಯಾನಾತ್ ಜಾಲ್ಯಾರ್ ತೆಚೊ ಶೆಡ್ ಕಾಡುನ್ ಘೆವ್‌ನಕಾಶಿ, ಕೊನ್ಬಿ ತುಮ್ಚ್ಯಾ ಉಜ್ವ್ಯಾ ಗಾಲಾರ್ ಮಾರ್‍ಲ್ಯಾರ್, ತುಜ್ಯಾ ರೊಡ್ಡ್ಯಾ ಬಾಜುಚ್ಯಾ ಗಾಲಾರ್‍ಬಿ ತೆಕಾ ಮಾರುಕ್ ಸೊಡ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:39
24 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಅಂದುಕೊಳ್ಳಬೇಡ.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಅದಕ್ಕಿಂತ ಅನ್ಯಾಯವನ್ನು ಯಾಕೆ ಸಹಿಸಬಾರದು? ಆಸ್ತಿಯ ನಷ್ಟವನ್ನು ಯಾಕೆ ತಾಳಬಾರದು?


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ಪ್ರಾಣಾಪಾಯದ ತನಕ ಇನ್ನೂ ಅದನ್ನು ಎದುರಿಸಲಿಲ್ಲ.


ಆತನಿಗೆ ಮುಸುಕುಹಾಕಿ ಹೊಡೆದು - ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು ಎಂದು ಆತನನ್ನು ಕೇಳಿದರು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತಕ್ಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಡು.


ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ಸಿಕ್ಕಬೇಕೆಂದು ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.


ಯೇಸು ಅವನಿಗೆ - ನಾನು ಮಾತಾಡಿದ್ದರಲ್ಲಿ ಏನಾದರೂ ದೋಷವಿದ್ದರೆ ಆ ದೋಷ ಇಂಥದೆಂದು ಸಾಕ್ಷಿ ಹೇಳು; ನಾನು ಮಾತಾಡಿದ್ದು ಸರಿಯಾಗಿದ್ದರೆ ನನ್ನನ್ನು ಯಾಕೆ ಹೊಡೆಯುತ್ತೀ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು