Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:1 - ಕನ್ನಡ ಸತ್ಯವೇದವು J.V. (BSI)

1 ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 “ತುಮ್ಚಿ ಬರಿ ಕಾಮಾ ಲೊಕಾಕ್ನಿ ದಿಸಿ ಸರ್ಕೆ ಕರುನಕಾಸಿ, ಅಶೆ ತುಮಿ ಕಾಯ್ ಕರುಕ್ ಲಾಗ್ಲ್ಯಾಶಿ ಮನುನ್ ಲೊಕಾಕ್ನಿ ಕಳ್ತಾ. ತುಮಿ ಅಶೆ ಕರ್ಲ್ಯಾರ್ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ನಾ ತುಮ್ಕಾ ಕಾಯ್ಬಿ ಭೊಮಾನ್ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:1
36 ತಿಳಿವುಗಳ ಹೋಲಿಕೆ  

ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನಿನ್ನ ದೇಹವೆಲ್ಲಾ ಬೆಳಕಾಗಿದ್ದು


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ.


ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು