Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:12 - ಕನ್ನಡ ಸತ್ಯವೇದವು J.V. (BSI)

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶೆ ದುಸ್ರ್ಯಾನಿ ಕರಲ್ಲ್ಯಾ ಚುಕಾ ಅಮಿ ಮಾಪ್ ಕರ್‍ತಾವ್, ತಸೆ ಅಮಿ ಕರಲ್ಲ್ಯಾ ಚುಕಾಬಿ ಮಾಪ್ ಕರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:12
25 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷವಿುಸುತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸಬೇಡ ಎಂದು ಹೇಳಿರಿ ಅಂದನು.


ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;


ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.


ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!


ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.


ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು


ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು