Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:27 - ಕನ್ನಡ ಸತ್ಯವೇದವು J.V. (BSI)

27 ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕೊನ್ ತರ್ ಎಕ್ಲ್ಯಾನ್ ಯವ್ಜುನ್ ಅಪ್ನಾಚ್ಯಾ ಜಿವನಾಚಿ ಅವ್ದಿ ಎಕ್ ಉಲ್ಲಿ ತರ್‍ಬಿ ಜಾಸ್ತಿ ಕರುನ್ ಘೆವ್ಕ್ ಹೊತಾ ಕಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:27
14 ತಿಳಿವುಗಳ ಹೋಲಿಕೆ  

ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ.


ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.


ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;


ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.


ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು