Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:24 - ಕನ್ನಡ ಸತ್ಯವೇದವು J.V. (BSI)

24 ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚ್ಯಾ ಸರ್ಕೆ ಚಲ್ತಾ ತೊ ಗುಂಡ್ಯಾ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಶಾನ್ಯಾ ಮಾನ್ಸಾ ಸರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:24
41 ತಿಳಿವುಗಳ ಹೋಲಿಕೆ  

ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಜ್ಞಾನಹೃದಯನು ಆಜ್ಞೆಗಳನ್ನು ವಹಿಸುವನು; ಹರಟೆಯ ಮೂರ್ಖನು ಕೆಡವಲ್ಪಡುವನು.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.


ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಅವರಲ್ಲಿ ಐದು ಮಂದಿ ಬುದ್ಧಿಯಿಲ್ಲದವರು, ಐದು ಮಂದಿ ಬುದ್ಧಿವಂತೆಯರು.


ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು.


ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು