Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:25 - ಕನ್ನಡ ಸತ್ಯವೇದವು J.V. (BSI)

25 ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಶಿಸಾ ಜೆಜುಕ್ಡೆ ಗೆಲಿ, ಅನಿ ತೆಕಾ ಉಟ್ವುನ್, “ಧನಿಯಾ, ಅಮ್ಕಾ ಹುರ್‍ವುನ್ ಘೆ! ಅಮಿ ಬುಡುನ್ ಮರ್‍ತಾವ್!” ಮನುನ್ ಸಾಂಗುಕ್‍ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:25
11 ತಿಳಿವುಗಳ ಹೋಲಿಕೆ  

ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.


ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲಕಲ್ಲೋಲವಾಗಿ ದೋಣಿಯು ತೆರೆಗಳಿಂದ ಮುಚ್ಚಿಹೋಯಿತು; ಆದರೆ ಆತನು ನಿದ್ದೆ ಹತ್ತಿ ಮಲಗಿದ್ದನು.


ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು