Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:28 - ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಸಮುಂದರಾಚ್ಯಾ ತಿಕುಲ್ಯಾ ಬಾಜುನ್ ಗೆದರಾ ಮನ್ತಲ್ಯಾ ಜಾಗ್ಯಾಕ್ ಯವ್ನ್ ಪಾವಲ್ಲ್ಯಾ ತನ್ನಾ ಲೊಕಾಕ್ನಿ ಮಾಟಿ ದಿತಲ್ಯಾ ಸಮಾದ್ಯಾನಿತ್ನಾ ದೊಗೆ ಜಾನಾ ಗಿರೆಲಾಗಲ್ಲಿ ಮಾನ್ಸಾ ಭಾಯ್ರ್ ಯೆವ್ನ್ ತೆಕಾ ಭೆಟ್ಲಿ. ತೆನಿ ಲೈ ಭಯನಾಕ್ ಹೊತ್ತ್ಯಾನಿ, ತಸೆಮನುನ್ ಕೊನ್‍ಬಿ ತ್ಯಾ ವಾಟೆನ್ ಫಿರುನ್ ಖೆಳಿನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:28
9 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.


ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು